ನೀರು ಕಾಯಿಸುವ ವಿಚಾರಕ್ಕೆ ಮುಖ್ಯಶಿಕ್ಷಕ, ಸೆಕ್ಯೂರಿಟಿ ಗಾರ್ಡ್ ಮಧ್ಯೆ ಜಗಳ: ಕೊಲೆಯಲ್ಲಿ ಅಂತ್ಯ

Homeರಾಜ್ಯ

ನೀರು ಕಾಯಿಸುವ ವಿಚಾರಕ್ಕೆ ಮುಖ್ಯಶಿಕ್ಷಕ, ಸೆಕ್ಯೂರಿಟಿ ಗಾರ್ಡ್ ಮಧ್ಯೆ ಜಗಳ: ಕೊಲೆಯಲ್ಲಿ ಅಂತ್ಯ

ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ನಾಗರಾಳ ಗ್ರಾಮದಲ್ಲಿ ನೀರು ಕಾಯಿಸುವ ವಿಚಾರದಲ್ಲಿ ಮುಖ್ಯ ಶಿಕ್ಷಕ ಮತ್ತು ಸೆಕ್ಯೂರಿಟಿ ಗಾರ್ಡ್ ನಡುವೆ ಜಗಳ ನಡೆದು, ಕಟ್ಟಿಗೆಯಿಂದ ಹೊಡೆದು ಸೆ

ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ನಾಗರಾಳ ಗ್ರಾಮದಲ್ಲಿ ನೀರು ಕಾಯಿಸುವ ವಿಚಾರದಲ್ಲಿ ಮುಖ್ಯ ಶಿಕ್ಷಕ ಮತ್ತು ಸೆಕ್ಯೂರಿಟಿ ಗಾರ್ಡ್ ನಡುವೆ ಜಗಳ ನಡೆದು, ಕಟ್ಟಿಗೆಯಿಂದ ಹೊಡೆದು ಸೆಕ್ಯೂರಿಟಿ ಗಾರ್ಡ್​ನನ್ನ ಕೊಲೆ ಮಾಡಲಾಗಿದೆ. ಆಸ್ಪತ್ರೆಗೆ ಸಾಗಿಸುವಾಗ ಸೆಕ್ಯೂರಿಟಿ ಗಾರ್ಡ್ ಮೃತಪಟ್ಟಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಬಾಗಲಕೋಟೆ, ಜನವರಿ 12: ಕಟ್ಟಿಗೆಯಿಂದ ಹೊಡೆದು ಸೆಕ್ಯೂರಿಟಿ ಗಾರ್ಡ್​ನನ್ನು ಮುಖ್ಯ ಶಿಕ್ಷಕ ಕೊಲೆ (death) ಮಾಡಿರುವಂತಹ ಘಟನೆ ಜಿಲ್ಲೆಯ ಬೀಳಗಿ ತಾಲೂಕಿನ ನಾಗರಾಳ ಗ್ರಾಮದ ರಾಧಾಕೃಷ್ಣ ಖಾಸಗಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ನಾಗಪ್ಪ ತೋಳಮಟ್ಟಿ ಮೃತ ಸೆಕ್ಯೂರಿಟಿ ಗಾರ್ಡ್. ಘಟನಾ ಸ್ಥಳಕ್ಕೆ ಬೀಳಗಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

COMMENTS

WORDPRESS: 0
DISQUS: