ಬಿಜೆಪಿ, ಆರ್‌ಎಸ್‌ಎಸ್‌ಗೆ ದೇಶ ಮೊದಲು ಅಲ್ಲ, ದೇಣಿಗೆ ಮೊದಲು : ಖರ್ಗೆ

Homeದೇಶ

ಬಿಜೆಪಿ, ಆರ್‌ಎಸ್‌ಎಸ್‌ಗೆ ದೇಶ ಮೊದಲು ಅಲ್ಲ, ದೇಣಿಗೆ ಮೊದಲು : ಖರ್ಗೆ

ಬೆಂಗಳೂರು : ಅಯೋಧ್ಯೆ ರಾಮ ಮಂದಿರ ದೇಣಿಗೆ "ಲೂಟಿ" ಕುರಿತು ಬಿಜೆಪಿ ಮತ್ತು ಆರ್‌ಎಸ್‌ಎಸ್ ವಿರುದ್ಧ ಮಂಗಳವಾರ ತೀವ್ರ ವಾಗ್ದಾಳಿ ನಡೆಸಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು, ಅವರಿ

ಪವರ್ ಕಟ್, ಸಿಸಿಟಿವಿಗಳು ಸ್ಥಗಿತ.. ಬಿಜೆಪಿಯವ್ರು ಏನೋ ಮಾಡ್ತಾ ಇದಾರೆ’: ಪಶ್ಚಿಮ ಬಂಗಾಳ ಸಿಎಂ Mamata Banerjee ಆತಂಕ
ಮಧ್ಯ ಪ್ರದೇಶ: ಲಿವ್​ಇನ್ ಸ್ನೇಹಿತೆಯನ್ನು ಕೊಂದು ಫ್ರಿಡ್ಜ್​ನಲ್ಲಿಟ್ಟ ವಿವಾಹಿತ! ಬರೋಬ್ಬರಿ 8 ತಿಂಗಳು ಅಲ್ಲೇ ಇತ್ತು ಮೃತದೇಹ
ಡಾ.ಅಂಬೇಡ್ಕರ ಅಧ್ಯಯನ ಕೇಂದ್ರದ ನಿರ್ದೇಶಕರನ್ನು ವಜಾ ಮಾಡಿ : ಮನವಿ
ಬೆಂಗಳೂರು : ಅಯೋಧ್ಯೆ ರಾಮ ಮಂದಿರ ದೇಣಿಗೆ “ಲೂಟಿ” ಕುರಿತು ಬಿಜೆಪಿ ಮತ್ತು ಆರ್‌ಎಸ್‌ಎಸ್ ವಿರುದ್ಧ ಮಂಗಳವಾರ ತೀವ್ರ ವಾಗ್ದಾಳಿ ನಡೆಸಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು, ಅವರಿಗೆ “ದೇಶ ಮೊದಲು” ಅಲ್ಲ, “ದೇಣಿಗೆ ಮೊದಲು” ಎಂದು ಟೀಕಿಸಿದರು.
ರಾಮ ಮಂದಿರ ದೇಣಿಗೆ ಹಗರಣ ಕುರಿತು ವಿಶೇಷ ತನಿಖಾ ತಂಡ(ಎಸ್‌ಐಟಿ) ತನಿಖೆ ಮಾಡುತ್ತಿರುವ ರೀತಿಯಿಂದ ಇದು ಸ್ಪಷ್ಟವಾಗಿದೆ ಎಂದು ಖರ್ಗೆ ಆರೋಪಿಸಿದರು.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ, “ಒಂದು ವಿಷಯ ಬಹಳ ಸ್ಪಷ್ಟವಾಗಿದೆ. ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ, ದೇಶ ಮೊದಲು ಅಲ್ಲ; ಅವರಿಗೆ ದೇಣಿಗೆ ಮೊದಲು” ಎಂದರು.
ಈ ವಿಷಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಮೌನವನ್ನು ಪ್ರಶ್ನಿಸಿದ ಖರ್ಗೆ, ಅಯೋಧ್ಯೆಯ ರಾಮ ಮಂದಿರದೊಳಗೆ ರಾಮ ಲಲ್ಲಾ ಪ್ರತಿಮೆಯ ಪ್ರತಿಷ್ಠಾಪನೆ(ಪ್ರಾಣ ಪ್ರತಿಷ್ಠೆ)ಯನ್ನು ಮೋದಿ ನೆರವೇರಿಸಿದರು. ದೇವಾಲಯವನ್ನು ಉದ್ಘಾಟಿಸಿದರು. ೧೫ ಸದಸ್ಯರನ್ನು ಒಳಗೊಂಡ ಟ್ರಸ್ಟ್ ಸಮಿತಿಯನ್ನು ರಚಿಸಿದರು. ಅವರಲ್ಲಿ ೧೨ ಮಂದಿಯನ್ನು ಕೇಂದ್ರ ಸರ್ಕಾರ ನಾಮನಿರ್ದೇಶನ ಮಾಡಿದೆ ಎಂದು ಹೇಳಿದರು.
“ಆ ನೇಮಕಾತಿಗಳನ್ನು ಯಾರು ಮಾಡಿದರು? ಮೋದಿ. ಈಗ, ಅಂತಹ ದೊಡ್ಡ ಹಗರಣ ನಡೆದಿದೆ. ಚಿನ್ನ ಕಾಣೆಯಾಗಿದೆ, ಬೆಳ್ಳಿ ಕಾಣೆಯಾಗಿದೆ, ಹಣ ಕಾಣೆಯಾಗಿದೆ, ಟ್ರಸ್ಟಿಗಳು ರಾಜೀನಾಮೆ ನೀಡುತ್ತಿದ್ದಾರೆ. ಆದರೂ ಪ್ರಧಾನಿ ಮೌನವಾಗಿದ್ದಾರೆ” ಎಂದು ಖರ್ಗೆ ಹೇಳಿದರು.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ದೊಡ್ಡ ಭಾಷಣಗಳನ್ನು ಮಾಡುತ್ತಿದ್ದಾರೆ. ಜನ, ರಾಮ ಭಕ್ತರ ನಂಬಿಕೆಯನ್ನು ಪ್ರಶ್ನಿಸಬಾರದು ಅಥವಾ ನೋಯಿಸಬಾರದು ಎಂದು ಹೇಳುತ್ತಿದ್ದಾರೆ ಎಂದು ಖರ್ಗೆ ಆರೋಪಿಸಿದರು.

COMMENTS

WORDPRESS: 0
DISQUS: